ಧಾವಂತ

ಅರ್ಧಮರ್ಧ ಮುಗಿದ ಮೇಲುಸೇತುವೆ
ಭೂಸ್ಪರ್ಶ ಕಾಣದ ಆ ಎರಡು ತುದಿಗಳು
ಪಾಳು ಬಿದ್ದ ಕಟ್ಟಡದ ಕಳೆ ಹೊತ್ತು
ಆಗಸವ ದಿಟ್ಟಿಸುತ ಚಾಚಿಕೊಳ್ಳುತಿವೆ
ಒಂದರ ಪಕ್ಕ ಒಂದರಂತೆ ಕಾಂಕ್ರೀಟು ಬಂಡೆಗಳು
ತುತ್ತ ತುದಿಯಲಿ ನಿಂತಿರುವ ಟೋಪಿಧಾರಿ
ಕಿವಿಗೊತ್ತಿಕೊಂಡು ಮೊಬೈಲು
ಮುಂದದಾವುದೋ ಒಂದು ದಿನ
ಟಾರು, ಬಿಳಿಯ ಬಿರುಕು-ರೇಖೆ ಬಳಿಸಿಕೊಂಡು
ಚತುಷ್ಪಥ ಹೆದ್ದಾರಿಯೆಂದು ಸಂಭಾವಿತಗೊಳ್ಳುವ
ಆ ಮೇಲುಸೇತುವೆಯ ಮೇಲೆ ಮನಬಂದಲ್ಲಿ ಓಡಾಡಲು
ಯಾರ ಅಪ್ಪಣೆಯೂ ಬೇಕಿಲ್ಲ ಅವನಿಗೆ
ಮಳೆ ಹೊಯ್ದು ಕಿಕ್ಕಿರಿದ ಕೆಳರಸ್ತೆಯಲಿ
ಕೊಸರಾಡುತ್ತಿರುವ ವಾಹನಗಳಿಗೆ
ಅವನ ಕುರಿತು ಹೊಟ್ಟೆಯುರಿದುಕೊಳ್ಳಲೂ ವೇಳೆಯಿಲ್ಲ!

-೫ ಆಗಸ್ಟ್ ೨೦೧೧

Comments

Chandru said…
Kavanagalanna chennagi Bareethideera Kiran Bhai..
Nanna Nenapideya nimage..
--Chandrachooda, Chitradurga

Popular posts from this blog

ಮಾತು-ಮೌನ-ಮನಸ್ಸು

ಗುಂಗು ಹಿಡಿಸುವ ಮಧುರಾನುಭವ

ನಿರೀಕ್ಷೆ