Posts

Showing posts from September, 2011

ಧಾವಂತ

ಅರ್ಧಮರ್ಧ ಮುಗಿದ ಮೇಲುಸೇತುವೆ ಭೂಸ್ಪರ್ಶ ಕಾಣದ ಆ ಎರಡು ತುದಿಗಳು ಪಾಳು ಬಿದ್ದ ಕಟ್ಟಡದ ಕಳೆ ಹೊತ್ತು ಆಗಸವ ದಿಟ್ಟಿಸುತ ಚಾಚಿಕೊಳ್ಳುತಿವೆ ಒಂದರ ಪಕ್ಕ ಒಂದರಂತೆ ಕಾಂಕ್ರೀಟು ಬಂಡೆಗಳು ತುತ್ತ ತುದಿಯಲಿ ನಿಂತಿರುವ ಟೋಪಿಧಾರಿ ಕಿವಿಗೊತ್ತಿಕೊಂಡು ಮೊಬೈಲು ಮುಂದದಾವುದೋ ಒಂದು ದಿನ ಟಾರು, ಬಿಳಿಯ ಬಿರುಕು-ರೇಖೆ ಬಳಿಸಿಕೊಂಡು ಚತುಷ್ಪಥ ಹೆದ್ದಾರಿಯೆಂದು ಸಂಭಾವಿತಗೊಳ್ಳುವ ಆ ಮೇಲುಸೇತುವೆಯ ಮೇಲೆ ಮನಬಂದಲ್ಲಿ ಓಡಾಡಲು ಯಾರ ಅಪ್ಪಣೆಯೂ ಬೇಕಿಲ್ಲ ಅವನಿಗೆ ಮಳೆ ಹೊಯ್ದು ಕಿಕ್ಕಿರಿದ ಕೆಳರಸ್ತೆಯಲಿ ಕೊಸರಾಡುತ್ತಿರುವ ವಾಹನಗಳಿಗೆ ಅವನ ಕುರಿತು ಹೊಟ್ಟೆಯುರಿದುಕೊಳ್ಳಲೂ ವೇಳೆಯಿಲ್ಲ! -೫ ಆಗಸ್ಟ್ ೨೦೧೧